ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ದೇಶದ ಸಮಸ್ತ ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಸಂವಿಧಾನದ ಆಶಯದ ಆಧಾರ ದಲ್ಲಿ ದಿಲ್ಲಿಯ ರಾಮ್ಲೀಲಾ ಮೈದಾನದಲ್ಲಿ ನವೆಂಬರ್ 27-28ರಂದು ಸಮಾವೇಶ ಹಮ್ಮಿ ಕೊಂಡಿದೆ ಎಂದು ಪಿಎಫ್ಐಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶರೀಫ್ ತಿಳಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ನಗರದ ನೆಹರೂ ಮೈದಾನದ ಲ್ಲಿಂದು ಹಮ್ಮಿಕೊಂಡಿದ್ದ ‘ಸಾಮಾಜಿಕ ನ್ಯಾಯ ಕ್ಕಾಗಿ ಸಮಾವೇಶ’ ಇದರ ರಾಷ್ಟ್ರೀಯ ಪ್ರಚಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
No comments:
Post a Comment